ಎಂಡೋಸಲ್ಫಾನ್ ನಿಷೇಧ : ಎರಡು ದಿನದಲ್ಲಿ ಸುಗ್ರೀವಾಜ್ಞೆ
Saturday, April 30th, 2011ಬೆಳಗಾವಿ, ಏ. 30 : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಜನರ ಆರೋಗ್ಯದ ಮೇಲೆ ವಿಪರೀತ ದುಷ್ಪರಿಣಾಮ ಬೀರಿರುವ ವಿಷಕಾರಕ ಕೀಟನಾಶಕ ಎಂಡೋಸಲ್ಫಾನ್ ನಿಷೇಧಿಸಿ ಇನ್ನೆರಡು ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿಯ ರಂಕಲಕೊಪ್ಪದಲ್ಲಿ ಹೇಳಿದ್ದಾರೆ. ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡುತ್ತಿದ್ದರು.
ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಡಿಯೂರಪ್ಪನವರು ಎಂಡೋಸಲ್ಫಾನ್ ನಿಷೇಧಿಸಲು ಬೆಂಬಲ ಕೋರಿ ಕೇರಳ ಮುಖ್ಯಮಂತ್ರಿ ವಿಎಸ್ ಅಚ್ಯುತಾನಂದನ್ ಅವರು ಬರೆದಿದ್ದ ಪತ್ರಕ್ಕೆ ಸಂಪೂರ್ಣ [...]











